Friday, October 1, 2010

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ!

ಟಿವಿ9ನಲ್ಲಿ ಬ್ರೇಕಿಂಗ್ ನ್ಯೂಸ್ ಎಂದು ಮೇಲೆ ಕೆಳಗೆ ಸುದ್ಧಿಗಳನ್ನು ಪ್ರಕಟಿಸುತ್ತಿರುತ್ತಾರೆ. ಆದರೆ ಆ ಎರಡು ಸುದ್ಧಿಗಳು ಬೇರೆ ಬೇರೆ ವಿಷಯಕ್ಕೆ ಸಂಬಂಧಿಸಿದ್ದರೆ, ಎರಡನ್ನೂ ಒಟ್ಟಿಗೆ ಕೂಡಿಸಿಕೊಂಡು ಓದಿ, ಎಷ್ಟು ಮಜವಾಗಿರುತ್ತದೆ ಎಂದು ಗೊತ್ತಾಗುತ್ತದೆ. ನಿನ್ನೆ ಅಯೋಧ್ಯೆ ಪ್ರಕರಣಕ್ಕೆ ತೀರ್ಪು ಬಂದ ಬೆನ್ನಲ್ಲೇ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರನೂ ಲಂಚ ಹಗರಣದಲ್ಲಿ ಸಿಕ್ಕಿಬಿದ್ದಿದ್ದು ಟಿವಿ9ನಲ್ಲಿ ಪ್ರಸಾರವಾಗುತ್ತಿತ್ತು. ಮೇಲೆ ಅಯೋಧ್ಯೆಯ ಬಗ್ಗೆ ಹಾಗೂ ಕೆಳಗೆ ಜಗದೀಶ್ ನಾಯ್ಡು ಬಗ್ಗೆ ಸಾಲುಗಳು, ಅದನ್ನು ಕೂಡಿಸಿ ಓದಿದಾಗ ನನಗೆ ಕಾಣಿಸಿದ ತಮಾಷೆ ಇಲ್ಲಿದೆ.

ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ

ಸುಪ್ರಿಂ ಕೋರ್ಟ್‌ಗೆ ಹೋಗಲು ತೀರ್ಮಾನ
ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿಕೆ

ನಿಜವಾದ ಸುದ್ಧಿಗಳನ್ನು ತಿಳಿಯಲು ಒಂದು, ಮೂರು ಹಾಗೂ ಎರಡು ನಾಲ್ಕನೆಯ ಸಾಲುಗಳನ್ನು ಓದಿ.

ಈ ರೀತಿ ಇನ್ನಷ್ಟು ಸುದ್ಧಿಗಳನ್ನು ಗಮನಿಸಿದಿರೆ ನಿಮ್ಮೊಂದಿಗೆ ಹಂಚಿಕೊಳ್ಳುವೆ, ನೀವೂ ಇಂತವುಗಳನ್ನು ನೋಡಿದರೆ ನಮ್ಮೊಂದಿಗೆ ಹಂಚಿಕೊಳ್ಳಿ.

-ಪ್ರಸನ್ನ ಶಂಕರಪುರ


Web Hosting

1 comment:

ಪ್ರಸನ್ನ ಶಂಕರಪುರ said...

ಧನ್ಯವಾದಗಳು ಸರ್‍, ನಾನೂ ನಿಮ್ಮ ಬ್ಲಾಗಿಗೆ ಭೇಟಿ ನೀಡುತ್ತಿರುತ್ತೇನೆ.